ಹೊಸಪೇಟೆ: ಶ್ರದ್ಧಾ, ಭಕ್ತಿಯಿಂದ ರಾಮನವಮಿಯನ್ನು ಭಾನುವಾರ ನಗರದಲ್ಲಿ ಆಚರಿಸಲಾಯಿತು.
ಇಲ್ಲಿನ ರಾಣಿಪೇಟೆ ರಾಮ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಆರತಿ ಬೆಳಗಲಾಯಿತು. ನಂತರ ಭಕ್ತರು ರಾಮನಾಮ ಜಪ ಮಾಡಿದರು.
ವಿವಿಧ ಬಡಾವಣೆಗಳಿಂದ ಜನ ಬಂದು ರಾಮನ ದರ್ಶನ ಪಡೆದರು. ಮಧ್ಯಾಹ್ನ ಭಕ್ತರಿಗಾಗಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಇದೇ ವೇಳೆ ಪಾನಕ ಕೂಡ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.