ADVERTISEMENT

ಬಿಜೆಪಿ ಅಭ್ಯರ್ಥಿ ಪರ ಶಾಸಕ ಶ್ರೀರಾಮುಲು ಪ್ರಚಾರ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 13:44 IST
Last Updated 16 ಏಪ್ರಿಲ್ 2019, 13:44 IST
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದಲ್ಲಿ ಶಾಸಕ ಬಿ.ಶ್ರೀರಾಮುಲು ಅವರು ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ರೋಡ್ ಶೋ ನಡೆಸಿದರು.
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದಲ್ಲಿ ಶಾಸಕ ಬಿ.ಶ್ರೀರಾಮುಲು ಅವರು ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ರೋಡ್ ಶೋ ನಡೆಸಿದರು.   

ಬಳ್ಳಾರಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ಶಾಸಕ ಬಿ.ಶ್ರೀರಾಮುಲು ಗ್ರಾಮೀಣ ಭಾಗದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಳವಾರ ರೋಡ್ಶೋ ನಡೆಸಿ ಮತಯಾಚನೆ ಮಾಡಿದರು.

ತಾಲ್ಲೂಕಿನ ಹಲಕುಂದಿ ಗ್ರಾಮದಲ್ಲಿ ರೋಡ್ ಷೋ ನಡೆಸಿದ ಶಾಸಕ ಶ್ರೀರಾಮುಲುಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಯನ್ನು ಗೆಲ್ಲಿಸಿಸಂಸತ್ತಿಗೆ ಕಳಿಸುವಂತೆ ಮನವಿ ಮಾಡಿಕೊಂಡರು. ನಂತರರೂಪನಗುಡಿ, ಪರಮ ದೇವನಹಳ್ಳಿ, ಮೋಕಾ ಹಾಗೂ ಸಂಗನಕಲ್ಲು ಮತ್ತು ಕೊಳಗಲ್ಲು ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಧಿಕಾರದಿಂದ ಕ್ಷೇತ್ರ ಸಂಪೂರ್ಣವಾಗಿ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

ಶಾಸಕ ಶ್ರೀರಾಮುಲು ಜೊತೆ ಮಾಜಿ ಸಂಸದ ಸಣ್ಣ ಫಕೀರಪ್ಪ ಮತ್ತು ಸ್ಥಳಿಯ ಮುಖಂಡರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.