ADVERTISEMENT

ಅತ್ಯಾಚಾರಿಗಳ ಪುರುಷತ್ವ ಹರಣ ಮಾಡಿ: ಅನುಪಮಾ ಶೆಣೈ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 18:50 IST
Last Updated 9 ಅಕ್ಟೋಬರ್ 2020, 18:50 IST
ಅನುಪಮಾ ಶೆಣೈ
ಅನುಪಮಾ ಶೆಣೈ   

ಬಳ್ಳಾರಿ: ‘ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತರಬೇಕು’ ಎಂದು ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ'ದ ಸಂಸ್ಥಾಪಕ ಅಧ್ಯಕ್ಷೆ ಅನುಪಮಾ ಶೆಣೈ ಆಗ್ರಹಿಸಿದರು.

‘ಪುರುಷತ್ವ ಹರಣ ಶಿಕ್ಷೆಯು ಅತ್ಯಾಚಾರಿಗಳಿಗಷ್ಟೇ ಅಲ್ಲದೇ, ಅಂಥವರನ್ನು ಅನುಸರಿಸುವ ಆಲೋಚನೆಯುಳ್ಳವರಿಗೂ ಎಚ್ಚರಿಕೆಯ ಪಾಠವಾಗುತ್ತದೆ’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸಿದರು.

‘ಹಾಥರಸ್‌ನ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿದರೆ ಮಾತ್ರ ಸಂತ್ರಸ್ತ ಯುವತಿಗೆ ಹಾಗೂ ಆಕೆಯ ಕುಟುಂಬದವರಿಗೆ ನ್ಯಾಯ ಸಿಗುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.