ADVERTISEMENT

6.24 ಕ್ವಿಂಟಾಲ್‌ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 13:15 IST
Last Updated 15 ಜನವರಿ 2021, 13:15 IST
ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿತ್ತವಾಡ್ಗಿ ಪೊಲೀಸರು ಹೊಸಪೇಟೆಯಲ್ಲಿ ಗುರುವಾರ ರಾತ್ರಿ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ
ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿತ್ತವಾಡ್ಗಿ ಪೊಲೀಸರು ಹೊಸಪೇಟೆಯಲ್ಲಿ ಗುರುವಾರ ರಾತ್ರಿ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ   

ಹೊಸಪೇಟೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 6.24 ಕ್ವಿಂಟಾಲ್‌ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ರಾತ್ರಿ ಚಿತ್ತವಾಡ್ಗಿಯ ನರೇಗಲ್‌ ಆಸ್ಪತ್ರೆ ಕ್ರಾಸ್‌ ಬಳಿ ವಶಪಡಿಸಿಕೊಂಡಿದ್ದಾರೆ.

ಚಲುವಾದಿಕೇರಿಯ ಆಟೊ ಚಾಲಕ ಸಿ. ಮೂರ್ತಿ, ತಾಯಿ ಮಂತಮ್ಮ ಹಾಗೂ ಕೃತ್ಯಕ್ಕೆ ಬಳಸಿದ ಆಟೊ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ ಅಡಿ ಚಿತ್ತವಾಡ್ಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಹಾರ ಇಲಾಖೆಯ ಇನ್‌ಸ್ಪೆಕ್ಟರ್‌ ಆರ್‌. ಅಜಿತ್‌ ಕುಮಾರ್‌, ಪಿಎಸ್‌ಐ ಸರೋಜಮ್ಮ, ಕಾನ್‌ಸ್ಟೆಬಲ್‌ಗಳಾದ ರಾಜೇಶ್‌, ಎಚ್‌.ಸಿ.ನಾಗರಾಜ, ರವಿಕುಮಾರ ದಾಳಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.