ತೋರಣಗಲ್ಲು: ಇಲ್ಲಿನ ಜಿಂದಾಲ್ ಬೈಪಾಸ್ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
₹ 52 ಸಾವಿರ ಮೌಲ್ಯದ 40 ಪಾಕೆಟ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡಿಯಲಾಗಿದೆ. ಈ ಸಂಬಂಧ ಬಳ್ಳಾರಿಯ ಮಿಲ್ಲರ್ಪೇಟೆಯ ಯುವರಾಜನನ್ನು ಬಂಧಿಸಲಾಗಿದೆ. ಅಕ್ಕಿ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಪಡೆದ ತೋರಣಗಲ್ಲು ಠಾಣೆ ಪಿಎಸ್ಐ ಎ.ಕಾಳಿಂಗ ಮತ್ತು ಪೊಲೀಸರು, ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿದೆ ಆರೋಪಿಯನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.