ADVERTISEMENT

ಬಳ್ಳಾರಿ: ಪಡಿತರ ಅಕ್ಕಿ ಅಕ್ರಮ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 4:57 IST
Last Updated 14 ಮಾರ್ಚ್ 2021, 4:57 IST

ತೋರಣಗಲ್ಲು: ಇಲ್ಲಿನ ಜಿಂದಾಲ್ ಬೈಪಾಸ್ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

₹ 52 ಸಾವಿರ ಮೌಲ್ಯದ 40 ಪಾಕೆಟ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡಿಯಲಾಗಿದೆ. ಈ ಸಂಬಂಧ ಬಳ್ಳಾರಿಯ ಮಿಲ್ಲರ್‍ಪೇಟೆಯ ಯುವರಾಜನನ್ನು ಬಂಧಿಸಲಾಗಿದೆ. ಅಕ್ಕಿ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಪಡೆದ ತೋರಣಗಲ್ಲು ಠಾಣೆ ಪಿಎಸ್‍ಐ ಎ.ಕಾಳಿಂಗ ಮತ್ತು ಪೊಲೀಸರು, ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿದೆ ಆರೋಪಿಯನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT