ADVERTISEMENT

ಪ್ರಜಾವಾಣಿ ವರದಿ ಫಲಶ್ರುತಿ: ಟಿಪ್ಪರ್-ಟ್ರ್ಯಾಕ್ಟರ್ ವಶ, ಕಲ್ಲು ಕ್ವಾರಿಗೆ ತಡೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 6:10 IST
Last Updated 31 ಜನವರಿ 2021, 6:10 IST
ದಾಳಿಯಲ್ಲಿ ಕಮಲಾಪುರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ವೈ. ಶಶಿಧರ್ ಪಾಲ್ಗೊಂಡಿದ್ದರು.
ದಾಳಿಯಲ್ಲಿ ಕಮಲಾಪುರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ವೈ. ಶಶಿಧರ್ ಪಾಲ್ಗೊಂಡಿದ್ದರು.   

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಸುತ್ತಮುತ್ತ ಅಕ್ರಮ ಕಲ್ಲು ಕ್ವಾರಿ ಗಣಿಕಾರಿಕೆ, ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಭಾನುವಾರ ಬೆಳಿಗ್ಗೆ ತಹಶೀಲ್ದಾರ್ ಎಚ್. ವಿಶ್ವನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ.

ದಾಳಿ ವೇಳೆ ನಾಲ್ಕು ಟ್ರ್ಯಾಕ್ಟರ್, ಒಂದು ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ. ಕಲ್ಲು ಗಣಿಗಾರಿಕೆ ನಿಲ್ಲಿಸಲಾಗಿದೆ.
'ನದಿಗೂ ಒದಗಿದೆ ಅಪಾಯ' ಶೀರ್ಷಿಕೆಯಡಿ ಭಾನುವಾರ 'ಪ್ರಜಾವಾಣಿ' ಒಳನೋಟದಲ್ಲಿ ವರದಿ ಪ್ರಕಟವಾಗಿತ್ತು. ವರದಿ ಆಧರಿಸಿ ತಹಶೀಲ್ದಾರ್ ಈ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ವಶಪಡಿಸಿಕೊಂಡ ಟ್ರ್ಯಾಕ್ಟರ್‌ಗಳೊಂದಿಗೆ ಅಧಿಕಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT