ಬಳ್ಳಾರಿ: ನಗರದ ಬಂಡಿಮೋಟ್ ಪ್ರದೇಶದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಆಟೋವನ್ನು ಎಪಿಎಂಸಿ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಆಹಾರ ನಿರೀಕ್ಷಕ ರವಿ ರಾಠೋಡ್ ಹಾಗೂ ಎಪಿಎಂಸಿ ಠಾಣೆ ಪೊಲೀಸರು ದಾಳಿ ನಡೆಸಿ ನಗರ ಮತ್ತು ಗ್ರಾಮಾಂತರ ಪ್ರದೇಶದಿಂದ ಕಡಿಮೆ ದರಕ್ಕೆ ಖರೀದಿಸಿ ಡಿ.ಹೀರೆಹಾಳ್ ಗ್ರಾಮದ ಕಡೆ ಸಾಗಣೆ ಮಾಡುತ್ತಿದ್ದ ₹34,500 ಬೆಲೆ ಬಾಳುವ 23.ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜಾಟ 16 ಮಂದಿ ಬಂಧನ:ನಗರದ ಪ್ರತಿಷ್ಟಿತ ಖಾಸಗಿ ಹೋಟೆಲ್ ನಲ್ಲಿ ಇಸ್ಪಿಟ್ ಜೂಜಾಟವಾಡುತ್ತಿದ್ದ 16 ಮಂದಿಯನ್ನು ಬಂಧಿಸಿ ₹73,850 ವಶಪಡಿಸಿಕೊಳ್ಳಲಾಗಿದೆ ಎಂದು ಗಾಂಧಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.