ಹೊಸಪೇಟೆ: ‘ಪ್ರಜಾವಾಣಿ’ ವರದಿಯಿಂದ ಎಚ್ಚೆತ್ತುಕೊಂಡಿರುವ ನಗರಸಭೆ, ಹೊರವರ್ತುಲ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸಿದೆ.
ಅಷ್ಟೇ ಅಲ್ಲ, ಭಾರಿ ವಾಹನಗಳ ಓಡಾಟವನ್ನು ತಡೆಯಲು ಬಳ್ಳಾರಿ ರಸ್ತೆಯಿಂದ ಹೊರವರ್ತುಲ ರಸ್ತೆಗೆ ಹೋಗುವ ಮಾರ್ಗದಲ್ಲಿ ಲೋಹದ ಕಮಾನುಗಳನ್ನು ನಿರ್ಮಿಸಿದೆ.
‘ಹೊರವರ್ತುಲ ರಸ್ತೆಯಲ್ಲಿ ಗುಂಡಿಗಳೇ ಗುಂಡಿ’ ಶೀರ್ಷಿಕೆಯ ಅಡಿಯಲ್ಲಿ ನ. 26ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಅನಂತಶಯನಗುಡಿಯಿಂದ ಬಳ್ಳಾರಿ ರಸ್ತೆ ವರೆಗಿನ ಹೊರವರ್ತುಲ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಭಾರಿ ವಾಹನಗಳ ಓಡಾಟದಿಂದ ಪದೇ ಪದೇ ರಸ್ತೆ ಹಾಳಾಗುತ್ತಿರುವುದು, ಅಪಘಾತಗಳು ಸಂಭವಿಸುತ್ತಿರುವುದು ಹಾಗೂ ಇಡೀ ಪ್ರದೇಶದಲ್ಲಿ ದೂಳು ಆವರಿಸಿಕೊಂಡಿರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.