ADVERTISEMENT

ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ: ಶ್ರೀರಾಮುಲು ಭರವಸೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 11:26 IST
Last Updated 21 ಆಗಸ್ಟ್ 2021, 11:26 IST
ಸಾರಿಗೆ ಸಚಿವ ಬಿ. ಶ್ರೀರಾಮುಲು
ಸಾರಿಗೆ ಸಚಿವ ಬಿ. ಶ್ರೀರಾಮುಲು   

ಬಳ್ಳಾರಿ: ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಿಸಲಾಗುವುದು; ಹಬ್ಬದ ಸಮಯದಲ್ಲಿ ತೊಂದರೆ ಆಗದಂತೆ ಎರಡು ತಿಂಗಳ ವೇತನ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಶನಿವಾರ ಭರವಸೆ ನೀಡಿದರು.

ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಲಾಭವೂ ಇಲ್ಲದೆ, ನಷ್ಟವೂ ಇಲ್ಲದೆ ಸಾರಿಗೆ ಸಂಸ್ಥೆಯನ್ನು ನಡೆಸಬೇಕಿದೆ. ಸದ್ಯ ಬಸ್ಸುಗಳು ಭರ್ತಿಯಾಗುತ್ತಿಲ್ಲ. ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಕ್ಕೆ ಬಸ್‌ ಸಂಪರ್ಕ ಸ್ಥಗಿತಗೊಳಿಸಲಾಗಿದೆ ಎಂದರು.

ಕೇಂದ್ರದಿಂದ 800 ರಾಜ್ಯದಿಂದ 600 ಎಲೆಕ್ಟ್ರಿಕ್‌ ಬಸ್‌ ಖರೀದಿ ಮಾಡಲಾಗುವುದು ಎಂದೂ ಶ್ರೀರಾಮುಲು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.