
ಪ್ರಜಾವಾಣಿ ವಾರ್ತೆಅಮಾನತು
ಬಳ್ಳಾರಿ: ನಗರದ ಬೆಂಗಳೂರು ರಸ್ತೆಯಲ್ಲಿರುವ ಖಬರಸ್ತಾನ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಿಕೆಯು ತನ್ನ ಅಧಿಕಾರಿಗಳನ್ನು ಅಮಾನತು ಮಾಡಿದೆ.
ಪಾಲಿಕೆ ವಿಷಯ ನಿರ್ವಾಹಕ ಶ್ರೀಕಾಂತ್, ಕಂದಾಯ ನಿರೀಕ್ಷರಾದ ಮನೋಹರ್, ನರೇಶ್ ಕುಮಾರ್, ಸಹಾಯಕ ಕಂದಾಯ ಅಧಿಕಾರಿ ವೆಂಕಟೇಶ್ವರಲು, ಕಂದಾಯ ಅಧಿಕಾರಿ ನಾರಾಯಣ, ಮುಖ್ಯ ಕಚೇರಿಯ ಡೇಟಾ ಎಂಟ್ರಿ ಆಪರೇಟರ್ ಸ್ನೇಹಾ ಅಮಾನತುಗೊಂಡವರು.
ಇವರ ವಿರುದ್ಧ ಬ್ರೂಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.