ADVERTISEMENT

ಮಣ್ಣೆತ್ತಿನ ಅಮವಾಸ್ಯೆ; ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 13:24 IST
Last Updated 2 ಜುಲೈ 2019, 13:24 IST
ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ಮಂಗಳವಾರ ಹಂಪಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು
ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ಮಂಗಳವಾರ ಹಂಪಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು   

ಹೊಸಪೇಟೆ: ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ವಿರೂಪಾಕ್ಷೇಶ್ವರನಿಗೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರಿಗೆ ಅಭಿಷೇಕ ಮಾಡಿ, ಹೂವಿನಿಂದ ಅಲಂಕರಿಸಿ, ಪೂಜೆ ಮಾಡಿ ಆರತಿ ಬೆಳಗಲಾಯಿತು. ವಿವಿಧ ಕಡೆಗಳಿಂದ ನೂರಾರು ಜನ ಬಂದು ದೇವರ ದರ್ಶನ ಪಡೆದರು. ಭಕ್ತರಿಗಾಗಿ ದೇವಸ್ಥಾನದಲ್ಲಿ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ಬೈಲುವದ್ದಿಗೇರಿ, ಕಾಕುಬಾಳು, ವಡ್ಡರಹಳ್ಳಿ ಸೇರಿದಂತೆ ಹಲವೆಡೆ ಮಣ್ಣಿನ ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.