ADVERTISEMENT

ಸಂಸತ್ ಭವನದಲ್ಲಿ ಅ.2ಕ್ಕೆ ಭಾಷಣಕ್ಕೆ ತೆಕ್ಕಲಕೋಟೆಯ ಅಖಿಲಾ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 20:33 IST
Last Updated 30 ಸೆಪ್ಟೆಂಬರ್ 2022, 20:33 IST
ಎಚ್.ಅಖಿಲಾ
ಎಚ್.ಅಖಿಲಾ   

ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ಸಿರುಗುಪ್ಪ ಸದಾಶಿವನಗರದ ನಿವಾಸಿ ಎಚ್.ಶ್ರೀದೇವಿ ಮತ್ತು ಎಚ್.ಮಂಜುನಾಥ ಇವರ ಪುತ್ರಿ ಅಖಿಲಾ ಎಚ್, ಅ.2ರ ಗಾಂಧಿ ಜಯಂತಿಯಂದು ದೆಹಲಿಯ ಸಂಸತ್ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಭಾಷಣ ಮಾಡಲಿದ್ದಾರೆ.

ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಖಿಲಾ, ಕೊಪ್ಪಳದ ಜಗದ್ಗುರು ಶ್ರೀಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕ ಪ್ರತಿನಿಧಿಸುತ್ತಿದ್ದು, ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ‘ನನ್ನ ಮೇಲೆ ಪ್ರಭಾವ ಬೀರಿದ ರಾಷ್ಟ್ರೀಯ ಸ್ವಾತಂತ್ರ್ಯ ನಾಯಕರು’ ವಿಷಯ ಕುರಿತು ಅವರು ಮಾತನಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.