ADVERTISEMENT

ಬಳ್ಳಾರಿ: ಆಭರಣ ತಯಾರಕರ ಪ್ರತಿಭಟನೆಗೆ ಶ್ರೀರಾಮುಲು ಬೆಂಬಲ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 15:19 IST
Last Updated 4 ಫೆಬ್ರುವರಿ 2025, 15:19 IST
ಬಳ್ಳಾರಿ ನಗರದ ಚಿನ್ನ ಮತ್ತು ಬೆಳ್ಳಿ ಆಭರಣ ತಯಾರಕರ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ಮಾಜಿ ಸಚಿವ ಬಿ. ಶ್ರೀರಾಮುಲು ಪಾಲ್ಗೊಂಡರು
ಬಳ್ಳಾರಿ ನಗರದ ಚಿನ್ನ ಮತ್ತು ಬೆಳ್ಳಿ ಆಭರಣ ತಯಾರಕರ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ಮಾಜಿ ಸಚಿವ ಬಿ. ಶ್ರೀರಾಮುಲು ಪಾಲ್ಗೊಂಡರು   

ಬಳ್ಳಾರಿ: ‘ತನಿಖೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ' ಎಂದು ಆರೋಪಿಸಿ ನಗರದ ಚಿನ್ನ ಮತ್ತು ಬೆಳ್ಳಿ ಆಭರಣ ತಯಾರಿಕರ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆ ಎರಡನೇ ದಿನವೂ ಮುಂದುವರಿಯಿತು.

ಪ್ರತಿಭಟನೆ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಮಂಗಳವಾರ ಬಂದ ಮಾಜಿ ಸಚಿವ ಬಿ. ಶ್ರೀರಾಮುಲು ಬೆಂಬಲ ಸೂಚಿಸಿದರು.

‘ಚಿನ್ನ ಬೆಳ್ಳಿ ಆಭರಣದ ಕಳವು ಪ್ರಕರಣಗಳಿಗೆ ಸಂಬಂಧಿಸಿ ಉದ್ಯಮದ ವರ್ತಕರನ್ನು ಮತ್ತು ಕೆಲಸಗಾರರನ್ನು ತನಿಖೆಯ ರೂಪದಲ್ಲಿ ಕಾನೂನು ಬಾಹಿರ ಹಿಂಸೆ, ದಬ್ಬಾಳಿಕೆ ನಡೆಸುತ್ತಿರುವುದನ್ನು ವಿರೋಧಿಸುತ್ತೇನೆ’ ಎಂದು ಹೇಳಿದರು.

ADVERTISEMENT

ಈ ಕುರಿತ ಮನವಿ ಪತ್ರವನ್ನು ಜಿಲ್ಲಾ ಆಡಳಿತ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಚಿನ್ನ ಬೆಳ್ಳಿ ಸಂಘದ ರಾಜ್ಯ ಘಟಕದ ಅಧ್ಯಕ್ಷರು, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

ಪೊಲೀಸ್ ಕಿರುಕುಳ ಇಲ್ಲ: ಎಸ್‌ಪಿ ಸ್ಪಷ್ಟನೆ
ನಗರದಲ್ಲಿ ನಡೆಯುತ್ತಿರುವ ಚಿನ್ನ ಬೆಳ್ಳಿ ಆಭರಣ ತಯಾರಿಕರ ಪ್ರತಿಭಟನೆಯ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಶುಭಾರಾಣಿ ವಿ.ಜೆ ‘ಬೇರೆ ಬೇರೆ ಕಡೆಗಳ ಸಮಸ್ಯೆ ಕುರಿತು ಪ್ರತಿಭಟನೆ ನಡೆಯುತ್ತಿದೆ. ಕಳವು ಪ್ರಕರಣಗಳಲ್ಲಿ ಆರೋಪಿಗಳು ಯಾರದ್ದಾದರೂ ಹೆಸರು ಹೇಳಿದ್ದರಷ್ಟೇ ಅವರನ್ನು ವಿಚಾರಿಸುತ್ತೇವೆ‌. ವಿನಾಕಾರಣ ಎಲ್ಲರನ್ನೂ ವಿಚಾರಣೆಗೆ ಕರೆಯುವುದಿಲ್ಲ. ಸದ್ಯ ಈಗ ನಡೆಯುತ್ತಿರುವ ಪ್ರತಿಭಟನೆ ನಮ್ಮ ಜಿಲ್ಲೆಗೆ ಸಂಬಂಧಿಸಿದ್ದಲ್ಲ. ಬಳ್ಳಾರಿ ಜಿಲ್ಲೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ನನಗೆ ತಿಳಿಸಲಿ. ಕಳವಿನ ಮಾಲುಗಳನ್ನು ಖರೀದಿ ಮಾಡಿದ್ದರೆ ಅದನ್ನು ಯಾರೇ ಆಗಲಿ ಹಿಂತಿರುಗಿಸಲೇಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.