ಹೊಸಪೇಟೆ (ವಿಜಯನಗರ): ನಗರದ ವಿವಿಧ ಮುಖ್ಯರಸ್ತೆಗಳೇ ಬಿಡಾಡಿ ದನಗಳ ತಾಣವಾಗಿ ಮಾರ್ಪಟ್ಟಿದೆ.
ನಡು ರಸ್ತೆಯಲ್ಲೇ ಬಿಡಾಡಿ ದನಗಳು ಬೀಡು ಬಿಟ್ಟಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇತ್ತೀಚೆಗೆ ನಗರಸಭೆ ಪ್ರಕಟಣೆ ಹೊರಡಿಸಿ, ದನಗಳನ್ನು ರಸ್ತೆಗೆ ಬಿಟ್ಟರೆ ಗೋಶಾಲೆಗಳಿಗೆ ಸಾಗಿಸಲಾಗುವುದು. ಮಾಲೀಕರು ಅವುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿತ್ತು. ಆದರೆ, ಅದು ಎಚ್ಚರಿಕೆಗಷ್ಟೇ ಸೀಮಿತವಾಗಿದ್ದು, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.
ರಸ್ತೆಯ ಎಲ್ಲೆಂದರಲ್ಲಿ ಬಿಡಾಡಿ ದನಗಳು ಓಡಾಡುವುದರಿಂದ ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಭಯದಲ್ಲಿ ಓಡಾಡುವಂತಾಗಿದೆ. ಇದು ಅಪಘಾತಕ್ಕೂ ಎಡೆಮಾಡಿಕೊಟ್ಟಿದೆ. ಕೂಡಲೇ ನಿಯಂತ್ರಿಸಲು ಕ್ರಮ ಜರುಗಿಸಬೇಕು.
–ಬಸವರಾಜ, ಚನ್ನಪ್ಪ, ಸ್ಥಳೀಯ ನಿವಾಸಿಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.