ADVERTISEMENT

ಅಪಘಾತ: ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಿದ ತಹಶೀಲ್ದಾರ್

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 1:56 IST
Last Updated 2 ಫೆಬ್ರುವರಿ 2021, 1:56 IST

ಕಂಪ್ಲಿ: ತಾಲ್ಲೂಕಿನ ಮೆಟ್ರಿ ಗ್ರಾಮದ ಬಳಿಯ ಮಾರೆಮ್ಮ ದೇವಸ್ಥಾನದ ರಾಜ್ಯ ಹೆದ್ದಾರಿ-29ರಲ್ಲಿ ಸೋಮವಾರ ಸಂಭವಿಸಿದ ಎರಡು ಬೈಕ್ ಡಿಕ್ಕಿ ಅಪಘಾತದಲ್ಲಿ ಗಾಯಗೊಂಡ ಮಗು ಮತ್ತು ವ್ಯಕ್ತಿಯೊಬ್ಬರನ್ನು ತಹಶೀಲ್ದಾರ್ ತಮ್ಮ ವಾಹನದಲ್ಲಿ ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.

ಮೆಟ್ರಿಯಿಂದ ಕಂಪ್ಲಿಗೆ ತಹಶೀಲ್ದಾರ್ ಗೌಸಿಯಾಬೇಗಂ, ಗ್ರಾಮ ಲೆಕ್ಕಾಧಿಕಾರಿ ಜಿಲಾನ್ ಜೀಪ್‍ನಲ್ಲಿ ತೆರಳುತ್ತಿದ್ದಾಗ ಪ್ರಸ್ತುತ ಅಪಘಾತ ಸಂಭವಿಸಿದ್ದು, ರಕ್ತಸ್ರಾವದಿಂದ ನರಳುತ್ತಿದ್ದ 5 ವರ್ಷದ ಗಂಡು ಮಗು ಕಾರ್ತಿಕ್ ಮತ್ತು ಗಾಯಗೊಂಡ ಬೈಕ್ ಸವಾರ ಮಾರುತಿ (23) ಅರನ್ನು ತಕ್ಷಣ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.

ಗಾಯಾಳುಗಳು ಗಂಗಾವತಿ ತಾಲ್ಲೂಕಿನ ಡಣಾಪುರ ಗ್ರಾಮದವರಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ನಗರಕ್ಕೆ ತೆರಳಿದರು ಎಂದು ಡಾ. ಮಲ್ಲೇಶಪ್ಪ ಮಾಹಿತಿ ನೀಡಿದರು. ಮತ್ತೊಂದು ಬೈಕ್‍ನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.