ತೆಕ್ಕಲಕೋಟೆ: ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಕುರಿತು ನಿರಂತರ ತಪಾಸಣೆ ಅಗತ್ಯ ಎಂದು ಎನ್ಸಿಡಿ ವೈದ್ಯೆ ಗಾಯತ್ರಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಶನಿವಾರ ನಡೆದ ಅಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನದಡಿ ಪ್ರತಿ ಮೂರು ತಿಂಗಳಿಗೊಮ್ಮೆ 30 ವರ್ಷ ಮೇಲ್ಪಟ್ಟವರು ವಿಶೇಷವಾಗಿ ಹೆಣ್ಣು ಮಕ್ಕಳು ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.
ಟಿಬಿ ಮೇಲ್ವಿಚಾರಕ ಹುಲಿಗೆಪ್ಪ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ಆಪ್ತ ಸಮಾಲೋಚಕಿ ಶೋಭಾ, ಪ್ರಯೋಗಶಾಲಾ ತಂತ್ರಜ್ಞೆ ತೇಜಸ್ವಿನಿ, ಡಿಇಒ ಚಂದ್ರಹಾಸ ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.