ಹೊಸಪೇಟೆ: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು ವ್ಯಕ್ತಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹3,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.
ನಗರದ ಹಾರೂನ್ ರಶೀದ್ಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ತೃಪ್ತಿ ಧರಣಿ ಆದೇಶ ಹೊರಡಿಸಿದ್ದಾರೆ. ನಗರದ ಗಾಂಧಿ ಕಾಲೊನಿಯ ಗೋವಿಂದರಾಜ ಶೇಲಟ್ ಎಂಬುವರ ಮನೆಯಲ್ಲಿ 2014ರ ಫೆಬ್ರುವರಿ 8ರಂದು ರಶೀದ್ ₹4.68 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಟಿ.ಬಿ. ಡ್ಯಾಂ ಠಾಣೆಯ ಸಿಪಿಐ ಎಸ್.ಕೆ. ಪ್ರಹ್ಲಾದ್, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಗೀತಾ ಎಸ್. ಮಿರಜಕರ್ ವಾದ ಮಂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.