ADVERTISEMENT

ಬಳ್ಳಾರಿ: ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 15:36 IST
Last Updated 22 ಆಗಸ್ಟ್ 2021, 15:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಳ್ಳಾರಿ: ಸಂಡೂರಿನಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‌ಪಾರ್ವತಿ (37), ಶ್ರೇಯಾ (16) ಹಾಗೂ ಮಾನಸ (13) ಮೃತರು. ಸಿರಗುಪ್ಪ ತಾಲ್ಲೂಕಿನ ಸಿರಿಗೇರಿ ಗ್ರಾಮದವರಾದ ಇವರು ಸಂಡೂರಿನಲ್ಲಿ ಕಿರಾಣಿ ಅಂಗಡಿ ಇಟ್ಟಿದ್ದರು.

ಶ್ರೇಯಾ ಶವ ಶುಕ್ರವಾರ ತಿರುಮಲ ನಗರ ಕ್ಯಾಂಪ್‌ನ 15ನೇ ವಿತರಣಾ ಕಾಲುವೆಯಲ್ಲಿ, ಮಾನಸ ಮೃತದೇಹ ಶನಿವಾರ ತಾಳೂರು ರಸ್ತೆಯಲ್ಲಿರುವ 14ನೇ ವಿತರಣಾ ಕಾಲುವೆ ಬಳಿ ಹಾಗೂ ಪಾರ್ವತಿ ಶವ ಭಾನುವಾರ ಅಸುಂಡಿ ಬಳಿಯ 15ನೇ ವಿತರಣಾ ಕಾಲುವೆಯಲ್ಲಿ ಸಿಕ್ಕಿದೆ.

ADVERTISEMENT

ಪಾರ್ವತಿ ಅವರ ಪತಿ ಶಂಕರ್‌ ಅವರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು. ಪಿ.ಡಿ ಹಳ್ಳಿ ಹಾಗೂ ಬಳ್ಳಾರಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.