ಬಳ್ಳಾರಿ: ತುಂಗಭದ್ರಾ ಅಣೆಕಟ್ಟೆ ಗೇಟ್ ಅಳವಡಿಕೆ ತಂಡದಲ್ಲಿ ಕೆಲಸ ಮಾಡಿದ್ದ 35 ಮಂದಿಗೆ ತಲಾ ₹50 ಸಾವಿರ ಬಹುಮಾನ ನೀಡುವುದಾಗಿ ವಸತಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಶನಿವಾರ ಘೋಷಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಗೇಟ್ ಅಳವಡಿಸಲು ಸಿಬ್ಬಂದಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ತಂಡದಲ್ಲಿರುವ ಒಟ್ಟು 35 ಮಂದಿಗೆ ಖುದ್ದು ಸನ್ಮಾನ ಮಾಡಿ, ₹50 ಸಾವಿರ ನಗದು ನೀಡುವುದಾಗಿ ಹೇಳಿದ್ದೆ. ಆದರೆ ಅನಿವಾರ್ಯ ಕಾರಣಗಳಿಂದ ಬೆಂಗಳೂರಿಗೆ ತುರ್ತಾಗಿ ತೆರಳಬೇಕಿದೆ. ಇನ್ನೆರಡು ಮೂರು ದಿನಗಳಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.