ADVERTISEMENT

ಎಸಿಬಿ‌ ಬಲೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 8:08 IST
Last Updated 9 ಅಕ್ಟೋಬರ್ 2020, 8:08 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶಕ್ಕೆ ಪಡೆದಿದ್ದಾರೆ

ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.