ಹೊಸಪೇಟೆ (ವಿಜಯನಗರ): ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯ ಕರ್ತವ್ಯ ಸೇರಿದಂತೆ ಇತರೆ ಕೆಲಸಕ್ಕೆ ನಿಯೋಜನೆಗೊಳ್ಳಲಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ‘ಡಿ’ ಗ್ರೂಪ್ ನೌಕರರಿಗೆ ಭಾನುವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕೋವಿಡ್ ಲಸಿಕೆ ನೀಡಲಾಯಿತು.
ವಿವಿಧ ಕಡೆಗಳಿಂದ ಬಂದಿದ್ದ ಜನರು ಆಧಾರ್ ಕಾರ್ಡ್, ಶಿಕ್ಷಣ ಸಂಸ್ಥೆಯ ಗುರುತಿನ ಕಾರ್ಡ್ಗಳನ್ನು ತೋರಿಸಿ, ಸಾಲಿನಲ್ಲಿ ನಿಂತುಕೊಂಡು ಲಸಿಕೆ ಪಡೆದರು. ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿತ್ತು. ಆದರೆ, ಅದನ್ನು ಲೆಕ್ಕಿಸದೇ ಜನ ಉತ್ಸಾಹದಿಂದ ಲಸಿಕೆ ಪಡೆದರು.
ಬೆಳಿಗ್ಗೆ 9.30ಕ್ಕೆ ಲಸಿಕೆ ಹಾಕುವ ಕೆಲಸ ಆರಂಭಗೊಂಡಿತು. ಅಷ್ಟರಲ್ಲಾಗಲೇ ಶಿಕ್ಷಕರು, ಉಪನ್ಯಾಸಕರು ಹಾಗೂ ನೌಕರರು ಬಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.