ADVERTISEMENT

‘ಪ್ರಯಾಣಿಕ ವಾಹನದಲ್ಲಿ ಸರಕು ಸಾಗಣೆ ನಿರ್ಬಂಧಿಸಿ‘

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 12:13 IST
Last Updated 8 ಜುಲೈ 2019, 12:13 IST
ತಾಲ್ಲೂಕು ಲಘು ವಾಹನಗಳ ಚಾಲಕರ ಸಂಘದವರು ಸೋಮವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಾಲ್ಲೂಕು ಲಘು ವಾಹನಗಳ ಚಾಲಕರ ಸಂಘದವರು ಸೋಮವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಹೊಸಪೇಟೆ: ಪ್ರಯಾಣಿಕರ ವಾಹನದಲ್ಲಿ ಸರಕು ಸಾಗಣೆ ಮಾಡುವುದನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ತಾಲ್ಲೂಕು ಲಘು ವಾಹನಗಳ ಚಾಲಕರ ಸಂಘದವರು ಸೋಮವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

‘ನಗರದಲ್ಲಿ ಐದು ನೂರಕ್ಕೂ ಹೆಚ್ಚು ಸರಕು ಸಾಗಣೆ ವಾಹನಗಳಿವೆ. ಹೀಗಾಗಿ ಕೆಲವೊಮ್ಮೆ ಬಾಡಿಗೆಯೇ ಸಿಗುವುದಿಲ್ಲ. ಪರಿಸ್ಥಿತಿ ಹೀಗಿರುವಾಗ ಪ್ರಯಾಣಿಕ ವಾಹನಗಳು ಸರಕು ಸಾಗಿಸುತ್ತೇವೆ. ಇದರಿಂದ ನಮಗೆ ತೊಂದರೆ ಉಂಟಾಗುತ್ತಿದೆ. ಸಂಸಾರ ನಡೆಸಲು ಆಗುತ್ತಿಲ್ಲ. ನಿಯಮದಂತೆ ಯಾರು ಯಾವ ಉದ್ದೇಶಕ್ಕಾಗಿ ವಾಹನ ಓಡಿಸಲು ಅನುಮತಿ ಪಡೆದುಕೊಂಡಿದ್ದಾರೋ ಅದರಂತೆ ನಡೆಸಬೇಕು. ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ಸರಕು ಸಾಗಣೆ ವಾಹನಗಳಿಗೆ ನಗರದಲ್ಲಿ ಅಧಿಕೃತ ನಿಲ್ದಾಣ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚಪ್ಪ, ಪ್ರಧಾನ ಕಾರ್ಯದರ್ಶಿ ಸಿ. ಕೃಷ್ಣ ಹಾಗೂ ಚಾಲಕರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.