ADVERTISEMENT

ವಿಜಯನಗರದಲ್ಲಿ ಮತ್ತೆ ಮಳೆ, ಮುಂದಿನ ದಿನಗಳಲ್ಲಿ ಉತ್ತಮ ಮಳೆ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 13:12 IST
Last Updated 26 ಜೂನ್ 2021, 13:12 IST
ಹೊಸಪೇಟೆಯಲ್ಲಿ ಶನಿವಾರ ಸುರಿದ ಮಳೆಯಲ್ಲೇ ಸಾರ್ವಜನಿಕರು ಓಡಾಡಿದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಶನಿವಾರ ಸುರಿದ ಮಳೆಯಲ್ಲೇ ಸಾರ್ವಜನಿಕರು ಓಡಾಡಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ಕೆಲಸಮಯ ಜಿಟಿಜಿಟಿ ಮಳೆಯಾಗಿದೆ.

ಬೆಳಿಗ್ಗೆಯಿಂದಲೇ ಕಾರ್ಮೋಡ ಕವಿದಿದ್ದರಿಂದ ತಂಪಾದ ವಾತಾವರಣ ಇತ್ತು. ಜಿಟಿಜಿಟಿ ಮಳೆಯಾಗಿದ್ದರಿಂದ ವಾತಾವರಣ ಮತ್ತಷ್ಟು ತಂಪಾಯಿತು. ಆಗೊಮ್ಮೆ ಈಗೊಮ್ಮೆ ಮಳೆ ಸುರಿಯುತ್ತಲೇ ಇತ್ತು. ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಇಪ್ಪಿತ್ತೇರಿ ಮಾಗಾಣಿ, ಸಂಕ್ಲಾಪುರ, ಕಾರಿಗನೂರು, ವ್ಯಾಸನಕೆರೆ, ಕಲ್ಲಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಜೂನ್‌ ಮೊದಲ ವಾರ ಮಳೆಯಾಗಿತ್ತು. ಅದಾದ ನಂತರ ಮಳೆ ಆಗಿರಲಿಲ್ಲ. ಶನಿವಾರ ಮತ್ತೆ ಮಳೆಯಾಗಿದ್ದರಿಂದ ಬಿತ್ತನೆ ಮಾಡಿರುವ ರೈತರಲ್ಲಿ ಭರವಸೆ ಮೂಡಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಬಹುದು ಎಂಬ ವಿಶ್ವಾಸ ರೈತರದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.