ಬಳ್ಳಾರಿ: ನಗರದ ಸಾಮಾಜಿಕಕಾರ್ಯಕರ್ತ ಹಾಗೂ ಸುದ್ದಿ ವಾಹಿನಿಯೊಂದರ ವರದಿಗಾರನ ಬೆಂಬಲಿಗರಿಂದ ರಾತ್ರಿ ವೇಳೆಯಲ್ಲಿ ಕರ್ತವ್ಯನಿರತ ವಿಮ್ಸ್ ಸಿಬ್ಬಂದಿ ಮೇಲೆ ಆಸ್ಪತ್ರೆಯಲ್ಲಿ ಹಲ್ಲೆ ಮಾಡಲಾಗಿದೆ.
ವಿ.ಕೆ.ಯಾದವಾಡ್ ಹಲ್ಲೆಗೊಳಗಾಗಿರುವ ಸಿನಿಯರ್ ಲ್ಯಾಬ್ ಟೆಕ್ನಿಶಿಯನ್. ಅವರನ್ನು ಗುಂಪೊಂದು ಎಳೆದುತಂದು ಹಲ್ಲೆ ಮಾಡಿದ್ದಾರೆ. ಈ ವಿಡಿಯೊ ಕೌಲ್ಬಜಾರ್ ಠಾಣೆಯ ಪೊಲೀಸರಿಗೆ ಲಭ್ಯವಾಗಿದೆ.
ಹಲ್ಲೆಯಿಂದ ಗಾಯಗೊಂಡಿದ್ದ ಸಿಬ್ಬಂದಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.