ADVERTISEMENT

ಮತದಾನ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 12:38 IST
Last Updated 27 ಮಾರ್ಚ್ 2023, 12:38 IST
ಹೊಸಪೇಟೆಯಲ್ಲಿ ಸೋಮವಾರ ಮತದಾನ ಜಾಗೃತಿ ಜಾಥಾ ನಡೆಯಿತು
ಹೊಸಪೇಟೆಯಲ್ಲಿ ಸೋಮವಾರ ಮತದಾನ ಜಾಗೃತಿ ಜಾಥಾ ನಡೆಯಿತು   

ಹೊಸಪೇಟೆ (ವಿಜಯನಗರ): ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಭಾಗಿತ್ವದಲ್ಲಿ ನಗರದಲ್ಲಿ ಸೋಮವಾರ ಮತದಾನ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತೆ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವಪ್ರಭು ಅವರು ನಗರದ ನೆಹರೂ ಕಾಲೊನಿ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ಕೊಟ್ಟರು.

‘ನಗರದ ವಿವಿಧ ವಾರ್ಡುಗಳಲ್ಲಿ ಕಸ ಸಂಗ್ರಹಿಸುವ ನಗರಸಭೆ ಕಸ ಸಂಗ್ರಹಣೆಯ ವಾಹನಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಅವುಗಳ ಮೂಲಕ ಮತದಾನದ ಜಾಗೃತಿ ಹಾಗೂ ಯುವ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸುವ ಕುರಿತು ಪ್ರಚಾರ ಕೈಗೊಳ್ಳಲಾಗುತ್ತದೆ. ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಸೇರಿದಂತೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.