ಬಳ್ಳಾರಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ ಮತದಾನ ಜಿಲ್ಲೆಯ 26 ಮತಗಟ್ಟೆಗಳಲ್ಲಿ ಭರದಿಂದ ನಡೆಯುತ್ತಿದ್ದು ಬೆಳಿಗ್ಗೆ 10ರ ವೇಳೆಗೆ 7.32% ಮತದಾನ ನಡೆದಿದೆ.
ನಗರದ ತಹಶೀಲ್ದಾರ್ ಕಚೇರಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಉಪ ಆಯುಕ್ತರ ಕಚೇರಿ ಮತಗಟ್ಟೆಯಲ್ಲಿ ಬಿಸಿಲು ಲೆಕ್ಕಿಸದೆ ಶಿಕ್ಷಕ ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಈ ಮತಗಟ್ಟೆಗಳ ಆವರಣದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ಗ್ರಾಮಾಂತರ ಪೊಲೀಸ್ ಠಾಣೆ, ಬ್ರೂಸ್ ಪೇಟೆ ಪೊಲೀಸ್ ಠಾಣೆ, ತೋಟಗಾರಿಕೆ ಇಲಾಖೆ ಕಚೇರಿ ಇರುವುದರಿಂದ ಹೆಚ್ಚಿನ ಜನದಟ್ಟಣೆ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.