ADVERTISEMENT

ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಸಿಇಒ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 13:52 IST
Last Updated 2 ಮಾರ್ಚ್ 2023, 13:52 IST
ಕೂಡ್ಲಿಗಿ ತಾಲ್ಲೂಕಿನ ಶಿವಪುರ ಸಮೀಪ ನಡೆಯುತ್ತಿರುವ ಕುಡಿವ ನೀರಿನ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವಪ್ರಭು ಬಿ. ಅವರು ಗುರುವಾರ ಪರಿಶೀಲಿಸಿದರು
ಕೂಡ್ಲಿಗಿ ತಾಲ್ಲೂಕಿನ ಶಿವಪುರ ಸಮೀಪ ನಡೆಯುತ್ತಿರುವ ಕುಡಿವ ನೀರಿನ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವಪ್ರಭು ಬಿ. ಅವರು ಗುರುವಾರ ಪರಿಶೀಲಿಸಿದರು   

ಹೊಸಪೇಟೆ (ವಿಜಯನಗರ): ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು ಬಿ. ಅವರು ಗುರುವಾರ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲಿಸಿದರು.

ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಗ್ರಾಮದ ಸಮೀಪದ ನಡೆಯುತ್ತಿರುವ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಯೋಜನೆಯ ವಿವಿಧ ಹಂತದ ಪ್ರಗತಿಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡ ಅವರು ಕಾಮಗಾರಿ ಸ್ಥಳದಲ್ಲಿ ಕಂಡುಬಂದ ನ್ಯೂನತೆಗಳನ್ನು ಸರಿಪಡಿಸಿ ಕಾಮಗಾರಿ ಮುಂದುವರೆಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.