ಆನೇಕಲ್: ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗಿದ್ದು ರಾಷ್ಟ್ರೀಯ ಹೆದ್ದಾರಿ 7ರ ವೀರಸಂದ್ರದ ಬಳಿ ಮಳೆಯ ನೀರು ರಸ್ತೆಯಲ್ಲಿ ತುಂಬಿ ಹರಿದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಎರಡು ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು.
ಜನರು ಮುಂದೆ ಸಾಗಲು ಸಾಧ್ಯವಾಗದೇ ಪರದಾಡಿದರು. ಸದಾ ಗಿಜಿಗುಡುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಕಿ.ಮೀಗಟ್ಟಲೇ ವಾಹನಗಳು ನಿಂತಿದ್ದವು.
ಇತ್ತೀಚಿಗೆ ಮಳೆ ಬಂದರೆ ಸಾಕು ವೀರಸಂದ್ರ ಜಂಕ್ಷನ್ನಲ್ಲಿ ನೀರು ತುಂಬಿಕೊಳ್ಳುತ್ತದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು, ಕಾರು, ಬಸ್ಗಳು ಸದಾ ಸಮಸ್ಯೆಗೆ ಸಿಲುಕಿಕೊಳ್ಳುತ್ತವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.