ದೊಡ್ಡಬಳ್ಳಾಪುರ: ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ಖಾತರಿ ಅಧಿನಿಯಮ-2011 ಏಪ್ರಿಲ್ 2 ರಿಂದ ಅನುಷ್ಠಾನಗೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ನಾಗರಿಕರಿಗೆ ಉತ್ತಮ ಸೇವೆ ನೀಡಲು ಸೇವಾಭಾವ ಹಾಗೂ ಶ್ರೀಸಾಮಾನ್ಯನ ದೃಷ್ಠಿಕೋನದಿಂದ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಕೊಡುವ ಸ್ಥಳದಲ್ಲಿ ಫ್ಲೆಕ್ಸ್ ಹಾಕಿಸಿ ಅದನ್ನು ಸ್ಕ್ಯಾನ್ ಮಾಡಿ ಜಿಲ್ಲಾಧಿಕಾರಿಯವರ ಇ-ಮೇಲ್ಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಸೇವೆಗಳ ಖಾತರಿ ಅಧಿನಿಯಮದಲ್ಲಿ ನಮೂದಿಸಿದ ಸೇವೆಗಳ ಪೈಕಿ ಸದ್ಯ ಇರುವ ಕಾನೂನು,ನಿಯಮ, ಮಾರ್ಗಸೂಚಿ ಯಾವುದೇ ಮಾನದಂಡ ಅನುಸರಿಸಲು ಸಮಸ್ಯೆ ಇದ್ದರೆ ತಕ್ಷಣ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.