ADVERTISEMENT

ಕೇಂದ್ರೀಯ ಪಠ್ಯ ಕಠಿಣವಲ್ಲ

​ಪ್ರಜಾವಾಣಿ ವಾರ್ತೆ
Published 12 ಜನವರಿ 2012, 19:30 IST
Last Updated 12 ಜನವರಿ 2012, 19:30 IST

ದೊಡ್ಡಬಳ್ಳಾಪುರ: ಕೇಂದ್ರೀಯ ಪಠ್ಯ ಕ್ರಮದ ಅಭ್ಯಾಸ ಕಠಿಣ ಎನ್ನುವ ಭಾವನೆ ಬಹುತೇಕ ಪೋಷಕರಲ್ಲಿದ್ದು, ಈ ಭಾವನೆ ತಪ್ಪು ತಿಳಿವಳಿಕೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು  ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಗೋಪಾಲ್‌ಕೃಷ್ಣ ಹೇಳಿದರು.

ನಗರದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಇಂದು ಉದ್ಯೋಗಕ್ಕೆ ಮಾತ್ರ ಎಂಬಂತಾಗಿದೆ.
 
ಆದ್ದರಿಂದ ಅಂಕಗಳಿಕೆಗೂ ವಿದ್ಯಾರ್ಥಿಗಳು ಪ್ರಾಧಾನ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರ ಕಡೆಗೆ ಆದ್ಯತೆ ನೀಡಬೇಕು ಎಂದರು.

  ಸಮಾರಂಭವನ್ನು  ನಿರೂಪಕ ಚಂದನ್ ಉದ್ಘಾಟಿಸಿದರು. ಎಂಎಸ್‌ವಿ ಪಬ್ಲಿಕ್ ಶಾಲೆ ಅಧ್ಯಕ್ಷ ಎ.ಸುಬ್ರಹ್ಮಣಿ, ಕಾರ್ಯದರ್ಶಿ ಮಂಜುಳಾ ಇತರರು  ಇದ್ದರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.