ADVERTISEMENT

ಕ್ರೀಡೆಗೆ ಪ್ರಾಯೋಜಕರ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ದೇವನಹಳ್ಳಿ: ಕ್ರೀಡಾ ಕ್ಷೇತ್ರದ  ಬೆಳವಣಿಗೆಗೆ ಪ್ರಾಯೋಜಕರ ಸಹಕಾರ ಅಗತ್ಯವೆಂದು ಬಯಪಾ ಮಾಜಿ ಅಧ್ಯಕ್ಷ ಸಿ.ಅಶ್ವತ್ಥ ನಾರಾಯಣ ತಿಳಿಸಿದರು.

ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಟ್ಯಾಕರ್ಸ್‌ ಕ್ರಿಕೆಟ್ ಕ್ಲಬ್ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ  ಅವರು ಮಾತನಾಡಿದರು. ದೈಹಿಕ, ಮಾನಸಿಕ ಮತ್ತು ಆರೋಗ್ಯ ಸುಧಾರಣೆಗೆ ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿವೆ ಎಂದರು.

ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್. ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಎಸ್. ಸಿ.ಘಟಕದ ಅಧ್ಯಕ್ಷ ಎ.ಚಿನ್ನಪ್ಪ, ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಸಿ.ಮುನಿಯಪ್ಪ ಮಾತನಾಡಿದರು. ಎ.ಸಿ.ಗುರುಸ್ವಾಮಿ, ಹನುಮಂತರಾಯಪ್ಪ, ರಮೇಶ್, ದೇ.ಸು.ನಾಗರಾಜ್,  ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸಿ.ಎಂ.ವೆಂಕಟೇಶ್,   ಎಸ್.ಮಂಜುನಾಥ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.