ADVERTISEMENT

ಜಾಹೀರಾತುಗಳ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 9:32 IST
Last Updated 20 ಮಾರ್ಚ್ 2014, 9:32 IST

ರಾಮನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಎಲ್ಲಾ ಜಾಹೀರಾತು, ಕಾಸಿಗಾಗಿ ಸುದ್ದಿ ಇತ್ಯಾ­ದಿ­ಗಳ ಬಗ್ಗೆ ನಿಗಾ ವಹಿಸಲು ರಚಿ­ಸಲಾಗಿರುವ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮಾಧ್ಯಮ ಪ್ರಮಾ­­­ಣೀಕರಣ ಮತ್ತು ಕಣ್ಗಾವಲು ಸಮಿತಿ (ಎಂಸಿಎಂಸಿ) ಸಭೆಯು ಕಂದಾಯ ಭವನದ ವಾರ್ತಾ­ಧಿಕಾರಿ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತ­ನಾಡಿದ ಸಮಿತಿಯ ಜಿಲ್ಲಾ ಸದಸ್ಯ ಕಾರ್ಯ­ದರ್ಶಿ ಹಮೀದ್ ಖಾನ್,  ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಚುನಾ­ವಣಾಧಿಕಾರಿಗಳು ಇದೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಜೊತೆಗೆ ತಾಲ್ಲೂಕು ಮಟ್ಟದ ಎಂಸಿಎಂಸಿ ಸಮಿ­ತಿಗಳನ್ನು ರಚಿಸಿ ಆದೇಶಿಸಿದ್ದಾರೆ.

ಸಮಿತಿಯ ಸದಸ್ಯರು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿನ ಪತ್ರಿಕೆಗಳು ಹಾಗೂ ಕೇಬಲ್ ಚಾನೆಲ್‌ಗಳಲ್ಲಿ ಪ್ರಸಾರ­ಗೊಳ್ಳುವ ಜಾಹೀರಾತು, ಕಾಸಿಗಾಗಿ ಸುದ್ದಿಗಳ ಬಗ್ಗೆ ಮಾಹಿತಿಯನ್ನು ತಾಲ್ಲೂಕು ಸಹಾಯಕ ಚುನಾವಣಾಧಿ­ಕಾರಿಗಳ ಗಮನಕ್ಕೆ ತರಬೇಕೆಂದು ಹೇಳಿದರು. ಇದಲ್ಲದೆ ಕರ­ಪತ್ರ, ಭಿತ್ತಿಪತ್ರ ಮತ್ತಿ­ತರ ಮುದ್ರಿತ ಚುನಾವಣಾ ಸಾಮ­ಗ್ರಿಗಳ ಬಗ್ಗೆಯೂ ಗಮನ ಹರಿಸಿ ಚುನಾ­ವಣಾ ಅಧಿ­ಕಾ­ರಿಗಳ ಗಮನಕ್ಕೆ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು. ಯಾವುದೇ ಅನುಮಾನ­ವಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ಸಂಪರ್ಕಿಸಲು ಸಭೆಯಲ್ಲಿ ಅವರು ತಿಳಿಸಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಸು.ತ.ರಾಮೇಗೌಡ, ಚಲುವರಾಜು, ಎಂ.ಎನ್.ಸುರೇಶ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.