ADVERTISEMENT

ಮರಕ್ಕೆ ಟೆಂಪೊ ಡಿಕ್ಕಿ: 28 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2011, 19:30 IST
Last Updated 26 ಸೆಪ್ಟೆಂಬರ್ 2011, 19:30 IST

ವಿಜಯಪುರ: ದ್ರಾಕ್ಷಿ ಕಟಾವಿಗೆ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 28 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ಇರಿಗೇನಹಳ್ಳಿ ಗೇಟ್ ಸಮೀಪ ನಡೆದಿದೆ.

ದ್ರಾಕ್ಷಿ ಕಟಾವಿಗಾಗಿ ತಾಲ್ಲೂಕಿನ ಬೀಡಿಗಾನಹಳ್ಳಿ ಗ್ರಾಮದಿಂದ ಪ್ರತಿದಿನ ವಿಜಯಪುರದ ಟೆಂಪೋ ಕಾರ್ಮಿಕರನ್ನು ಕರೆತರಲಾಗುತ್ತಿತ್ತು. ಸೋಮವಾರ ಬೆಳಿಗ್ಗೆ ಆಂಧ್ರ ಮೂಲದವರನ್ನು ಕೆಲಸಕ್ಕೆಂದು ಕರೆತರುವಾಗ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್, ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.