ADVERTISEMENT

ಯುವಕರಿಗೆ ಅಧಿಕಾರ ದೊರೆತರೆ ಅಭಿವೃದ್ಧಿ ಸಾಧ್ಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 8:14 IST
Last Updated 29 ಡಿಸೆಂಬರ್ 2017, 8:14 IST

ವಿಜಯಪುರ : ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಯುವಕರ ಕೈಗೆ ಅಧಿಕಾರ ಸಿಗಬೇಕು ಎಂದು ಸಮಾಜ ಸೇವಕ ಎಂ.ಮುಖೇಶ್ ಬಾಬು ಹೇಳಿದರು. ನೂತನವಾಗಿ ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎಂ.ಮಣಿಕಂಠ ಅವರನ್ನು ಗುರುವಾರ ಅಭಿನಂದಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಗೆ ಸಿಗಬೇಕು. ಸಿಕ್ಕಿರುವ ಅಧಿಕಾರವನ್ನು ಸಮಾಜ ಒಳಿತಿಗಾಗಿ ಉಪಯೋಗ ಮಾಡುವುದನ್ನು ಯುವಜನರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಮಾಣಿಕರು, ಬದ್ಧತೆ ಇರುವವರು, ಕನಸುಗಳನ್ನು ಹೊಂದಿರುವವರು ಬಂದರೆ ಬದಲಾವಣೆ ಸಾಧ್ಯವಾಗುತ್ತದೆ. ಒಂದು ವೇಳೆ ಅಪ್ರಾಮಾಣಿಕರು, ಭ್ರಷ್ಟರು, ಸಂಪತ್ತನ್ನು ವೃದ್ಧಿ ಮಾಡಿಕೊಳ್ಳುವವರ ಕೈಗೆ ಅಧಿಕಾರ ನೀಡಿದರೆ ಅಪಾಯ ತಪ್ಪಿದಲ್ಲ ಎಂದರು.

ADVERTISEMENT

ನೂತನವಾಗಿ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಎಂ.ಮಣಿಕಂಠ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಯುವಜನರ ಕೌಶಲ್ಯಾಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.

ಯುವಜನರಿಗೆ ಯೋಜನೆಗಳನ್ನು ಮುಟ್ಟಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಪಕ್ಷ ಸಂಘಟನೆಗೂ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.ಯುವ ಮುಖಂಡರಾದ ನಾಗೇಶ್, ಸುಹೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.