ADVERTISEMENT

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 6:20 IST
Last Updated 20 ಮಾರ್ಚ್ 2018, 6:20 IST

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣೇಶ್ವರಿ ಟ್ರಸ್ಟ್ ವತಿಯಿಂದ ಇಲ್ಲಿನ ಚಿಕ್ಕರಾಯಪ್ಪನಹಳ್ಳಿ ಯಲ್ಲಿ ಭಾನುವಾರ ‘ಶುದ್ಧ ಕುಡಿಯುವ ನೀರಿನ ಘಟಕ’ ಉದ್ಘಾಟಿಸಿಲಾಯಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಸತ್ಯಸಾಯಿ ಅನ್ನಪೂರ್ಣೇಶ್ವರಿ ಟ್ರಸ್ಟ್‌ನ ಟ್ರಸ್ಟಿ ಕುಸುಮಾ, ಪ್ರಸ್ತುತ ಟ್ರಸ್ಟ್ ಶೈಕ್ಷಣಿಕ ಸೇವೆಯೊಂದಿಗೆ ಗ್ರಾಮೀಣ ಪ್ರದೇಶದ ಬೇಕು ಬೇಡಗಳನ್ನು ಅರಿತು ಕಾರ್ಯ ನಿರ್ವಹಿಸುತ್ತಿದೆ. ಶುದ್ಧ ನೀರಿನ ಘಟಕಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುತ್ತಾ ಸೇವಾ ಕಾರ್ಯವನ್ನು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಸ್ತರಿಸಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಅಪ್ಪಯಣ್ಣ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಾನತೆ ಸಾಧಿಸಲು ಶ್ರೀ ಸತ್ಯಸಾಯಿ ಟ್ರಸ್ಟ್ ಸೇವಾ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಶ್ಲಾಘಿಸಿದರು.

ADVERTISEMENT

ಟ್ರಸ್ಟಿಗಳಾದ ಆನಂದ್‌ ಕಟ್ಲೆ, ಶ್ರೀ ಸಾಯಿಪ್ರಸಾದ್, ಜೆಡಿಎಸ್‌ ರಾಜ್ಯ ಪ್ರದಾನ ಕಾರ್ಯದರ್ಶಿ ಎ.ನರಸಿಂಹಯ್ಯ, ಮೆಳೇಕೋಟೆ ಗ್ರಾಮ
ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಆರ್. ಚಿದಾನಂದ್, ಸದಸ್ಯ ಸಿ.ಕೆ. ದೇವರಾಜ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್. ವೆಂಕಟೇಶ್‌ಬಾಬು, ವಿ.ಎಸ್‌.ಎಸ್‌.ಎನ್ ನಿರ್ದೇಶಕ ಎಸ್. ಮಂಜುನಾಥ್, ಮುಖಂಡರಾದ ರಾಮಣ್ಣ, ರಾಜಶೇಖರ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.