ADVERTISEMENT

ಜೂಜಾಟ: 80 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 2:59 IST
Last Updated 2 ಆಗಸ್ಟ್ 2021, 2:59 IST
ದೇವನಹಳ್ಳಿಯ ಕನ್ನಮಂಗಲ ಗೇಟ್‌ನಲ್ಲಿ ಜೂಜಾಟಕ್ಕೆ ಉಪಯೋಗಿಸುತ್ತಿದ್ದ ಕಟ್ಟಡ
ದೇವನಹಳ್ಳಿಯ ಕನ್ನಮಂಗಲ ಗೇಟ್‌ನಲ್ಲಿ ಜೂಜಾಟಕ್ಕೆ ಉಪಯೋಗಿಸುತ್ತಿದ್ದ ಕಟ್ಟಡ   

ದೇವನಹಳ್ಳಿ:ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಕಟ್ಟಡವೊಂದರಲ್ಲಿ ನಡೆಯುತ್ತಿದ್ದು ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಆಂಧ್ರ ಮೂಲದ ವ್ಯಕ್ತಿಗಳು ಸೇರಿದಂತೆ 80ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಕನ್ನಮಂಗಲ ಗೇಟ್‌ನಲ್ಲಿರುವ ಕಟ್ಟಡವೊಂದರಲ್ಲಿ ಜೂಜು ಅಡ್ಡೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಕಟ್ಟಡದಲ್ಲಿ ಜೂಜಾಡುತ್ತಿದ್ದವರನ್ನು ಬಂಧಿಸಿದ್ದಾರೆ.

ಆಂಧ್ರದಿಂದ ಬಂದು ಇಲ್ಲಿ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದರೂ ಸ್ಥಳೀಯ ಪೊಲೀಸರಿಗೆ ಮಾಹಿತಿ ಇರಲಿಲ್ಲವೇ, ಒಂದು ವೇಳೆ ಮಾಹಿತಿಯಿದ್ದರೂ ತಟಸ್ಥವಾಗಿದ್ದು ಏಕೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.