ADVERTISEMENT

ಆನೇಕಲ್ | ಪತಿ ಸಾವಿನ ದಿನವೇ ಏಳು ವರ್ಷದ ಮಗನೊಂದಿಗೆ ಕೆರೆಗೆ ಹಾರಿದ ತಾಯಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2023, 15:25 IST
Last Updated 13 ಆಗಸ್ಟ್ 2023, 15:25 IST
ಆತ್ಮಹತ್ಯೆ ಮಾಡಿಕೊಂಡ ವಿಜಯಲಕ್ಷ್ಮೀ, ಹರಿಹರರ್‌
ಆತ್ಮಹತ್ಯೆ ಮಾಡಿಕೊಂಡ ವಿಜಯಲಕ್ಷ್ಮೀ, ಹರಿಹರರ್‌   

ಆನೇಕಲ್ : ತಾಲ್ಲೂಕಿನ ಬನ್ನೇರುಘಟ್ಟ ಪೊಲೀಸ್‌ ಠಾಣೆ ವ್ಯಾಪ್ತಿಯ ಸಕಲವಾರದಲ್ಲಿ ಶನಿವಾರ ಏಳು ವರ್ಷದ ತನ್ನ ಮಗನನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯಲಕ್ಷ್ಮೀ(33), ಇವರ ಪುತ್ರ ಹರಿಹರನ್‌(7) ಮೃತರು.

ಆಂಧ್ರಪ್ರದೇಶದ ಮೂಲದ ಇವರು ತಾಲ್ಲೂಕಿನ ಸಕಲವಾರ ಸಮೀಪದ ಸಿ.ಕೆ.ಪಾಳ್ಯದಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ವಿಜಯಲಕ್ಷ್ಮೀ ಅವರ ಪತಿ ಗಣೇಶ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

ADVERTISEMENT

ವಿಜಯಲಕ್ಷ್ಮಿ ಅವರ ಪತಿ ಮೊಬೈಲ್‌ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಎರಡು ವರ್ಷದ ಹಿಂದೆ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಘಟನೆ ಕುಟುಂಬಕ್ಕೆ ಅಘಾತ ತಂದಿತ್ತು. ಅಂದಿನಿಂದಲೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿಜಯಲಕ್ಷ್ಮೀ ಸಕಲವಾರದ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಖಿನ್ನತೆಗೆ ಒಳಗಾಗಿದ್ದ ವಿಜಯಲಕ್ಷ್ಮೀ ಕಳೆದ ಆರು ತಿಂಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಪತಿ ತೀರಿಕೊಂಡ ದಿನವೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.