ADVERTISEMENT

ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 4:52 IST
Last Updated 6 ಡಿಸೆಂಬರ್ 2022, 4:52 IST
ವಿಜಯಪುರ ಹೋಬಳಿ ಇರಿಗೇನಹಳ್ಳಿ ಗೇಟ್ ನಲ್ಲಿ ಅಪಘಾತಕ್ಕೀಡಾಗಿದ್ದ ದ್ವಿಚಕ್ರ ವಾಹನ
ವಿಜಯಪುರ ಹೋಬಳಿ ಇರಿಗೇನಹಳ್ಳಿ ಗೇಟ್ ನಲ್ಲಿ ಅಪಘಾತಕ್ಕೀಡಾಗಿದ್ದ ದ್ವಿಚಕ್ರ ವಾಹನ   

ವಿಜಯಪುರ (ಬೆಂ.ಗ್ರಾಮಾಂತರ): ಹೋಬಳಿಯ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇರಿಗೇನಹಳ್ಳಿ ಗೇಟ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಸೋಮವಾರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗ್ರಾಮದ ನಿವಾಸಿ ಮದನ್ (21) ಮೃತಪಟ್ಟವರು. ಮತ್ತೊಬ್ಬ ಸವಾರನನ್ನು ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ವೀರೇಂದ್ರಪ್ರಸಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT