ದೊಡ್ಡಬಳ್ಳಾಪುರ: ಲಗೇಜಿಗೆ ಟಿಕೆಟ್ ನೀಡುವ ವಿಚಾರವಾಗಿ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ನಿರ್ವಾಹಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ನಲ್ಲಿ ಪ್ರಯಾಣಿಸಲು ಕುಟುಂಬವೊಂದು ಲಗೇಜಿಗೆ ₹30 ಬದಲು ₹20 ಪಡೆಯುವಂತೆ ನಿರ್ವಾಹಕನೊಂದಿಗೆ ಜಗಳ ಮಾಡಿಕೊಂಡಿದ್ದಾರೆ.
ಈ ವೇಳೆ ನಿರ್ವಾಹಕ ಮಾರುತಿ ಎಂಬುವವರ ಮೇಲೆ ಪ್ರಯಾಣಿಕರ ಕುಟುಂಬದ ಸದಸ್ಯರು ಹಲ್ಲೆ ನಡೆಸಿದ್ದಾರೆ. ನೆರವಿಗೆ ಬಂದ ಚಾಲಕ ಶರಣಪ್ಪರ ಮೇಲೂ ಹಲ್ಲೆ ನಡೆದಿದೆ.
ಗಾಯಗೊಂಡ ನಿರ್ವಾಹಕ ಮಾರುತಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೆ ಕಾರಣವಾಗಿರುವ ಶಬೀರ್ ಮತ್ತಿತರರ ಮೇಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.