ದೊಡ್ಡಬಳ್ಳಾಪುರ:ಪಾಲನಜೋಗಳಹಳ್ಳಿ ಸಮೀಪದ ಟಿಪ್ಪುನಗರದಲ್ಲಿ ಅಂಗಡಿ ಮುಂದೆ ಕುಳಿತು ಹರಟೆ ಹೊಡೆಯುತ್ತಿದ್ದವರನ್ನು ಮನೆಗೆ ಹೋಗುವಂತೆ ಬುದ್ದಿ ಹೇಳಿದ ಎಎಸ್ಐ ರಾಮಯ್ಯ, ಕಾನ್ಸ್ಟೇಬಲ್ ಗಂಗಯ್ಯ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮವಸ್ತ್ರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಲ್ಲೆಗೆ ಒಳಗಾಗಿರುವ ಪೊಲೀಸ್ ಸಿಬ್ಬಂದಿ ನೀಡಿರುವ ದೂರಿನಂತೆ ಏಜಾಜ್, ಶಾಹೀದ್, ಅಕ್ಬರ್, ಮುಬಾರಕ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.