ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಕಾವೇರಿ ಹೆಸರಿನ ಜೀಬ್ರಾ ಶುಕ್ರವಾರ ಮರಿಯೊಂದಕ್ಕೆ ಜನ್ಮ ನೀಡಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸುನೀಲ್ ಪನ್ವಾರ್ ತಿಳಿಸಿದ್ದಾರೆ.
ಕಾವೇರಿ ಮತ್ತು ಭರತ್ ಎಂಬ ಜೋಡಿ ಜೀಬ್ರಾಗಳಿಗೆ ಮರಿ ಜನಿಸಿದೆ. ಈಗ ಜೀಬ್ರಾಗಳ ಸಂಖ್ಯೆ ಆರಕ್ಕೇರಿದೆ. ತಾಯಿ ಮತ್ತು ಮರಿ ಆರೋಗ್ಯವಾಗಿದ್ದು, ವೈದ್ಯ ಡಾ. ಉಮಾಶಂಕರ್ ನೇತೃತ್ವದ ತಂಡ ಮತ್ತು ಪ್ರಾಣಿ ಪಾಲಕರು ಆರೈಕೆ ಮಾಡುತ್ತಿದ್ದಾರೆ. ಮರಿಯು ಕಂದು ಬಣ್ಣದ ಪಟ್ಟೆಗಳನ್ನು ಹೊಂದಿದ್ದು, ಅಂತಿಮವಾಗಿ ಕಪ್ಪುಬಣ್ಣಕ್ಕೆ ತಿರುಗುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.