ADVERTISEMENT

ಹೊಸಕೋಟೆ: ಬೆಂಗಾಲ್ ಲ್ಯಾಂಪ್ಸ್ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 4:42 IST
Last Updated 8 ಆಗಸ್ಟ್ 2021, 4:42 IST
ಆನೇಕಲ್ ತಾಲ್ಲೂಕಿನ ಬಿಂಗಿಪುರ ಸಮೀಪದ ಬೆಟ್ಟದಾಸನಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ತಾಯಂದಿರಿಗೆ ಪುಷ್ಪಿ ಕಿಟ್ ವಿತರಿಸಲಾಯಿತು
ಆನೇಕಲ್ ತಾಲ್ಲೂಕಿನ ಬಿಂಗಿಪುರ ಸಮೀಪದ ಬೆಟ್ಟದಾಸನಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ತಾಯಂದಿರಿಗೆ ಪುಷ್ಪಿ ಕಿಟ್ ವಿತರಿಸಲಾಯಿತು   

ಹೊಸಕೋಟೆ: ನಗರ ಹೊರವಲಯದ ಬೂದಿಗೆರೆ ಕ್ರಾಸ್‌ನಲ್ಲಿರುವ ಬೆಂಗಾಲ್ ಲ್ಯಾಂಪ್ಸ್ ಕಾರ್ಖಾನೆಯ ಕಾರ್ಮಿಕರ ಸರ್ವ ಸದಸ್ಯರ ಸಭೆಯು ಆ. 8ರಂದು ಬೆಳಿಗ್ಗೆ 10.30ಕ್ಕೆ ಕಾರ್ಖಾನೆಯ ಮುಂಭಾಗದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಭಾಗವಹಿಸಬೇಕು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಕ್ಯಾಸೆಟ್ ನಾಗರಾಜ್ತಿಳಿಸಿದ್ದಾರೆ.

ಕಾರ್ಮಿಕರಿಗೆ ಯಾವುದೇ ಮಾಹಿತಿ ನೀಡದೆ ಕಳೆದ 35 ವರ್ಷಗಳ ಹಿಂದೆ ಕಾರ್ಖಾನೆಯನ್ನು ಮುಚ್ಚಿ ಕಾರ್ಮಿಕರನ್ನು ನಡುನೀರಿನಲ್ಲಿ ಬಿಟ್ಟು ಹೋಗಿದ್ದ ಕಾರ್ಖಾನೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಬಗ್ಗೆ ಈವರೆಗೆ ಆಗಿರುವ ಬೆಳವಣಿಗೆಯನ್ನು ವಕೀಲರ ಸಭೆಯಲ್ಲಿ ತಿಳಿಸಲಾಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ವಕೀಲರು ಸಭೆಗೆ ತಿಳಿಸುತ್ತಾರೆ. ಆದ್ದರಿಂದ ಈ ಸಭೆ ಹೆಚ್ಚಿನ ಮಹತ್ವದ್ದಾಗಿದೆ. ಎಲ್ಲಾ ಕಾರ್ಮಿಕರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಸಂಘದ ಕಾರ್ಯದರ್ಶಿ ಅಬ್ದುಲ್ಲಾ ಸಾಬ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT