ಆನೇಕಲ್ : ‘ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಮಕ್ಕಳು ಸರ್ಕಾರ ಬದಲಾಗಲಿ, ಮಂದಿರವನ್ನು ಒಡೆಯುತ್ತೇವೆ ಎಂಬ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಪ್ರವೃತ್ತಿಯು ಕೆಲವರ ವಿಕೃತಿ ಪ್ರತೀಕ’ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದರು.
ತಾಲೂಕಿನ ಬಿದರಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಕ್ಕಳಲ್ಲಿ ಮತ್ತು ಯುವಕರಲ್ಲಿ ವಿಕೃತಿ ಮನಸ್ಸು ಕಿತ್ತುಹಾಕಿ ಸಂಸ್ಕೃತಿ ಮೂಡಿಸುವ ಅವಶ್ಯ ಇದೆ. ಹಿಂದೂಗಳು ಜಾಗೃತಾರಾಗುವುದರಿಂದ ಮಾತ್ರ ಮಂದಿರಗಳ ರಕ್ಷಣೆ ಸಾಧ್ಯ. ಹಾಗಾಗಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು’ ಎಂದರು.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಜ.22ರಂದು ನಡೆಯಲಿದೆ. ಸಾವಿರಾರರು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹಾಗಾಗಿ ಪ್ರತಿ ಗ್ರಾಮಗಳಲ್ಲಿಯೂ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಜನರು ತಮ್ಮ ಗ್ರಾಮಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಬೇಕು ಎಂದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.