ಆನೇಕಲ್ : ತಾಲ್ಲೂಕಿನ ಜಿಗಣಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಬೆಂಗಳೂರು ನಗರ ಜಿಲ್ಲಾ ಸಮಿತಿಯಿಂದ ಬುದ್ಧ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ತಿರುಪಾಳ್ಯ ಮುನಿರಾಜು ಮಾತನಾಡಿ, ಬುದ್ಧ ಮತ್ತು ಅಂಬೇಡ್ಕರ್ ಸಿದ್ಧಾಂತ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆದರ್ಶದಿಂದ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದಾಗಿದೆ. ಭಗವಾನ್ ಬುದ್ಧ ಜ್ಞಾನದ ಪ್ರತೀಕವಾಗಿದ್ದು ಅವರ ಜ್ಞಾನದೀಪ ಪ್ರತಿಯೊಂದು ಕುಟುಂಬದಲ್ಲಿಯೂ ಬೆಳಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಕುಟುಂಬದಲ್ಲಿಯೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಮುಖಂಡರಾದ ನಾಗಣ್ಣ, ಮುನಿರಾಜು, ಗೌತಮ್ ವೆಂಕಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.