ADVERTISEMENT

ಬಾಗಿಲು ಕಳಚಿ ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್‌

ಶಾಲೆ ಮುಂದೆ ಶವವಿಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 4:35 IST
Last Updated 5 ಸೆಪ್ಟೆಂಬರ್ 2023, 4:35 IST
ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರತಿಭಟನಕಾರರು
ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರತಿಭಟನಕಾರರು   

ಕುಣಿಗಲ್: ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಸೋಮವಾರ ಬಿಜಿಎಸ್ ಶಾಲಾ ಬಸ್‌ನಿಂದ ಬಿದ್ದ ವಿದ್ಯಾರ್ಥಿ ಮೇಲೆ ಹಿಂಬದಿ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಟ್ಟಿಗೆಹಳ್ಳಿ ರಾಮಕೃಷ್ಣ ಅವರ ಪುತ್ರ ಮೋಹಿತ್ (9) ಮೃತ ವಿದ್ಯಾರ್ಥಿ. ‌ಶಾಲೆ ಮುಗಿದ ನಂತರ ಶಾಲಾ ವಾಹನದಲ್ಲಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಬಾಗಿಲು ಕಳಚಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ತಲೆ ಮೇಲೆ ಹಿಂಬದಿ ಚಕ್ರ ಹರಿದಿದೆ. ಬಸ್‌ ಚಾಲಕ ಸದಾನಂದ ಪರಾರಿಯಾಗಿದ್ದಾನೆ.

ಶಾಲಾ ಆಡಳಿತ ಮಂಡಳಿ ಮತ್ತು ಚಾಲಕನ ನಿರ್ಲಕ್ಷ್ಯ ಖಂಡಿಸಿ ಪೋಷಕರು, ಸಂಬಂಧಿಕರು ಮತ್ತು ಗ್ರಾಮಸ್ಥರು ಶಾಲೆ ಮುಂಭಾಗದ ಹಳೆ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು.

ADVERTISEMENT

ಸ್ಥಳಕ್ಕೆ ‌ಭೇಟಿ ನೀಡಿದ ಮಂಗಳಾನಂದನಾಥ ಸ್ವಾಮೀಜಿ, ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳುವ ಭರವಸೆ ನೀಡುವಂತೆ ಆಗ್ರಹಿಸಿದರು.  

ಕುಣಿಗಲ್ ಬಿಜಿಎಸ್ ಶಾಲೆ ಮುಂಭಾಗದ ರಸ್ತೆಯಲ್ಲಿಟ್ಟಿದ್ದ ಮೃತ ವಿದ್ಯಾರ್ಥಿಯ ಶವವನ್ನು ಸ್ಥಳಾಂತರಿಸಿದ ಪೊಲೀಸರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.