ADVERTISEMENT

ಬಸ್‌ ಡಿಕ್ಕಿ: ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 19:53 IST
Last Updated 11 ಜುಲೈ 2024, 19:53 IST
ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಸಂಭವಿಸಿದ ಅಪಘಾತದಿಂದಾಗಿ ನಜ್ಜುಗುಜ್ಜಾಗಿರುವ ಬಿಎಂಟಿಸಿ ಬಸ್
ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಸಂಭವಿಸಿದ ಅಪಘಾತದಿಂದಾಗಿ ನಜ್ಜುಗುಜ್ಜಾಗಿರುವ ಬಿಎಂಟಿಸಿ ಬಸ್   

ಆನೇಕಲ್: ಬನ್ನೇರುಘಟ್ಟ ಸಮೀಪದ ಜಂಗಲ್‌ಪಾಳ್ಯ ಬಳಿ ಗುರುವಾರ ಬಿಎಂಟಿಸಿ ಬಸ್‌ ಎರಡು ದ್ವಿಚಕ್ರ ವಾಹನ ಮತ್ತು ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ಆಂಧ್ರಪ್ರದೇಶದ ಕೆ.ಬಿ.ಪ್ರಸಾದ್‌ ರಾವ್‌ (60) ಎಂಬುವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಕಡೆಗೆ ಹೊರಟಿದ್ದ ಬಿಎಂಟಿಸಿ ಬಸ್‌ ಅಡ್ಡ ಬಂದ ಬೈಕ್‌ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎರಡು ದ್ವಿಚಕ್ರ ವಾಹನ ಮತ್ತು ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಬದಿ ನಿಂತಿದ್ದ ಪ್ರಸಾದ್‌ ರಾವ್‌ ಅವರಿಗೂ ಡಿಕ್ಕಿ ಹೊಡೆದಿದೆ. ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ADVERTISEMENT

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕ್ರೇನ್‌ ಮೂಲಕ ಬಸ್ ಮತ್ತು ಸರಕು ಸಾಗಣೆ ವಾಹನ ತೆರವುಗೊಳಿಸಲಾಯಿತು. ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.