ADVERTISEMENT

ಹೊಲಕ್ಕೆ ನುಗ್ಗಿದ ಕಾರು– ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 13:13 IST
Last Updated 17 ಡಿಸೆಂಬರ್ 2019, 13:13 IST

ವಿಜಯಪುರ: ಆವತಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಲಗಳಿಗೆ ನುಗ್ಗಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಹೈದರಾಬಾದ್ ಸಮೀಪದ ಉಪ್ಪಲ್‌ನ ರವೀಂದ್ರ (53) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ದರ್ಶನ ಪಡೆದು ವಾಪಸ್‌ ಬರುವ ವೇಳೆ, ಆವತಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಟಿಯುವಿ ವಾಹನದ ಅಪಘಾತವಾಗಿದೆ. ಕಾರಿನಲ್ಲಿದ್ದ ಇತರ ನಾಲ್ಕು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್‌ ಇನ್‌ಸ್ಪೆಕ್ಟರ್ ಡಿ.ಮಂಜುನಾಥ್ ತಿಳಿಸಿದ್ದಾರೆ.

ಕಾರಿನಲ್ಲಿದ್ದ ಅನಿಲ್, ಪ್ರವೀಣ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳು ದೇವನಹಳ್ಳಿಯ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.