ADVERTISEMENT

ಸ್ವಚ್ಛತೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 6:47 IST
Last Updated 18 ಅಕ್ಟೋಬರ್ 2020, 6:47 IST

ದೇವನಹಳ್ಳಿ: ‘ಪರಿಸರ ಸ್ವಚ್ಛತೆ ಎಂಬುದು ಗಾಂಧಿ ಜಯಂತಿಗೆ ಸೀಮಿತವಾಗಬಾರದು’ ಎಂದು ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾ ಅಧಿಕಾರಿ ಗೋವಿಂದರಾಜು ಹೇಳಿದರು.

ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣ ಮತ್ತು ಅಂಗನವಾಡಿ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನಸಿಕ ಸದೃಢತೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಯೋಗ ಅಗತ್ಯ. ನಾವು ವಾಸಿಸುವ ಪರಿಸರ, ಶುದ್ಧ ಕುಡಿಯುವ ನೀರು, ಆಹಾರ ಪದ್ಧತಿ ಬಗ್ಗೆಯೂ ಎಚ್ಚರಿಕೆವಹಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ಆರೋಗ್ಯಯುತ ಸಮಾಜ ಮುಖ್ಯ ಪಾತ್ರ
ವಹಿಸುತ್ತದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.