ಹೊಸಕೋಟೆ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯು ಗಾಂಧಿ ಜಯಂತಿ ಪ್ರಯುಕ್ತ ನಗರದ ವಿವಿಧ ವಿದ್ಯಾರ್ಥಿ ನಿಲಯಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂಭಾಗದ ರಸ್ತೆ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ಪೊಲೀಸ್ ಅಧೀಕ್ಷಕರಾದ ಉಮಾಶಂಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಯ್ಯ, ನಿಲಯದ ಸಿಬ್ಬಂದಿಯಾದ ಪುಟ್ಟರಾಜು, ಕೃಷ್ಣಪ್ಪ, ಶಿವಣ್ಣ, ಲೋಕೇಶ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.